ವಿವೇಕಾನಂದ ಸ್ವಾಮಿ - ವಸಂತ ಕುಸುಮಾಂಜಲಿ - ಡಿವಿಜಿ
ಪುಣ್ಯಭೂಮಿಯೆ, ನಿನ್ನ ಪುಣ್ಯಗಂಧವನಖಿಲಭುವನದೊಳ್ ಪಸರಿಸುತ ನಲಿವುದೆಂದು ।ಆರ್ಯಕುಲಜರೆ, ನಿಮ್ಮ ನಿಜಧರ್ಮದೀಪಮಂಮರಳಿ ಬೆಳಗಿಸಿ ಗುರುತೆವಡೆವುದೆಂದು ।ವೇದಜನನಿಯೆ, ನಿನ್ನ ದಿವ್ಯಗಾನವ ಕೇಳೆ ।
ಜಗವೆಲ್ಲ ತಲೆವಾಗಿ ಬರುವುದೆಂದು ।
ವೇದಾಂತಕೇಸರಿಯೆ, ನಿದ್ರೆಯಂ ತೊರೆದು ನೀಂ
ಗುಹೆಯಿಂದ ಪೊರಮಟ್ಟು ಮೆರೆವುದೆಂದು
ಇಂತು ನಿಜಜನಪದವನೆಳ್ಚರಂಗೊಳಿಸುತನಿಶಂ ।
ಭರತಮಾತೆಯ ಜೈತ್ರಯಾತ್ರೆಯೊಳ್ ಪ್ರಮುಖನೆನಿಸಿ ।
ವಿಬುಧವಂದಿತನಾಗಿ ಲೋಕಸಂಮಾನ್ಯನಾಗಿ ।
ಶ್ರೀ ವಿವೇಕಾನಂದನೆಸೆದನಂದು ॥